ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ನ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ ಒಂದು ದಿನದ ನಂತರ, ಅವರು ಪೊಲೀಸ್ ಠಾಣೆಯಲ್ಲಿದ್ದಾಗ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ವರದಕ್ಷಿಣೆ ಪ್ರಕರಣದಲ್ಲಿ(divorce case) ಹೇಳಿಕೆ ನೀಡಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ (sexual harassment) ನೀಡಿರುವ ಆರೋಪ ಬೆಂಗಳೂರಿನ ಸುದ್ದಗುಂಟೆಪಾಳ್ಯ(Sudduguntepalya) ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿಬಂದಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ ಸ್ವಾಮಿ ಅವರು ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಸರಣಿ ಟ್ವೀಟ್ ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಅಳಲುತೋಡಿಕೊಂಡಿದ್ದಾರೆ.
ಏಪ್ರಿಲ್ 8ರಂದು ನನ್ನ ಸಹೋದರ ಸ್ನೇಹಿತನ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಿಕೆ ನೀಡಲು ಸ್ಟೇಷನ್ಗೆ ಹೋಗಿದ್ದ ವೇಳೆ ಸಬ್ ಇನ್ಸ್ ಪೆಕ್ಟರ್ ಮಂಜುನಾಥ ಸ್ವಾಮಿ ಅವರು ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಮನೆಗೆ ಹೋಗಿ ಕರೆ ಮಾಡಿ ಹಾಗೂ ನಿಮ್ಮ ಪೋಟೊಗಳನ್ನ ಕಳುಹಿಸಿ ಎಂದಿದ್ದಾರೆ ಎಂದು ಶೀತಲ್ ಸುಸಾನ ಅಬ್ರಹಾಂ ಎನ್ನುವ ಮಹಿಳೆ ಟ್ವಿಟ್ಟರ್ನಲ್ಲಿ ಆರೋಪಿಸಿದ್ದಾರೆ. ಅಲ್ಲದೇ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾಳೆ. ಇನ್ನು ಮಹಿಳೆಯ ಟ್ವೀಟ್ಗೆ ಬೆಂಗಳೂರು ನಗರ ಪೊಲೀಸ್, ಪ್ರತಿಕ್ರಿಯಿಸಿ ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದಾರೆ.
ಇದೀಗ ಎಸ್ ಐ,ಮಂಜುನಾಥ್, ಇಲಾಖಾ ವಿಚಾರಣೆಗಾಗಿ ಅಮಾನತುಗೊಳಿಸಲಾಗಿದೆ. ಡಿಸಿಪಿ(ಆಗ್ನೇಯ) ಅಡಿಯಲ್ಲಿ ಆರೋಪಿಗಳನ್ನು ದಾಖಲಿಸಿದ್ದೇವೆ ಎಂದು ಸಿಕೆ ಬಾಬಾ ಹೇಳಿದ್ದಾರೆ ಐಪಿಸಿವಿಭಾಗಗಳು 354A (ಲೈಂಗಿಕ ಕಿರುಕುಳ) ಮತ್ತು 354D (ಹಿಂಬಾಲಿಸುವುದು). ಬಂದವರುತುಮಕೂರು, ಮಂಜುನಾಥ್ 2017 ರ ಬ್ಯಾಚ್ನವರು.
ಟ್ವೀಟ್ ಏನಿಕ್ಕೆ ಡಿಲೀಟ್ ಆಗಿತ್ತು?
ಟ್ರೀಟ್ ಮಾಡಿದ ಮಹಿಳೆ ನಂತರ ಅದನ್ನು ಡಿಲೀಟ್ ಮಾಡಲಾಗಿತ್ತು. ಇದನ್ನು ಕೆಲವರು ಟ್ವೀಟ್ ಮೂಲಕ ಆ ಮಹಿಳೆಗೆ ಪ್ರಶ್ನಿಸಿದಾಗ , ಅವರ ಕುಟುಂಬ ಒತ್ತಡದಿಂದ ಆ ಟ್ವೀಟ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.









