ಬೆಂಗಳೂರು ವಿಶ್ವವಿದ್ಯಾಲಯ ವಿಶ್ವವಿದ್ಯಾಲಯ ಕಾನೂನು ಕಾಲೇಜು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಒಂದು ದಿನದ ‘ಕಾನೂನು ಸೇವೆಗಳ ಚಟುವಟಿಕೆ”ಯ ವಲಯ ಮಟ್ಟದ ಕಾರ್ಯಗಾರವನ್ನು ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ .ವೀರಪ್ಪ ಬಿ ರವರು ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ. ಸಿಂಥಿಯ ಮಿನೆಸ್, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಗಳ ಸದಸ್ಯ ಕಾರ್ಯದರ್ಶಿ ಶ್ರೀ. ಹೆಚ್ ಶಶಿಧರ ಶೆಟ್ಟಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯ ಕಾನೂನು ಕಾಲೇಜಿನ ಪ್ರಾಂಶುಪಾಲರು ಹಾಗೂ ಡೀನ್ ಆದ ಸುರೇಶ್ ವಿ ನಾಡಗೌಡ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಾಂಶುಪಾಲರಾದ ಪ್ರೊ. ವಿ. ಸುದೇಶ್, ಹಾಗೂ ವಿಶ್ವವಿದ್ಯಾಲಯ ಕಾನೂನು ಕಾಲೇಜಿನ ಕಾನೂನು ಸೇವಾ ಕೇಂದ್ರಗಳ ಸಂಯೋಜಕರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಸತೀಶ್ ಗೌಡ ಎನ್. ಉಪಸ್ಥಿತರಿದ್ದರು.






