ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ತಾ. 01-08-2024 ರಂದು ಸುಪ್ರೀಂ ಕೋರ್ಟ್ 7 ಜನ ನ್ಯಾಯಾಧೀಶರ ಪೀಠ ಐತಿಹಾಸಿಕ ತೀರ್ಪು ನೀಡಿತು.
ಪರಿಶಿಷ್ಟ ಜಾತಿಗಳಲ್ಲಿ ಹಿಂದುಳಿದಿರುವಿಕೆ ಆಧಾರದಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ ವರ್ಗೀಕರಣ ಮಾಡಿ ಒಳ ಮೀಸಲಾತಿ ಕಲ್ಪಿಸಲು ಆದೇಶಿಸಿತು. 35 ವರ್ಷಗಳ ಮಾದಿಗ ಮತ್ತು ಮಾದಿಗೆ ಸಂಬಂಧಿತ ಸಮಾಜದ ಹೋರಾಟಕ್ಕೆ ಮಹಾಜಯ ಲಭಿಸಿತು.
ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದಲ್ಲಿ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಆಯೋಗವು 101 ಪರಿಶಿಷ್ಟ ಜಾತಿಗಳ ಹಿಂದುಳಿದಿರುವಿಕೆಯಲ್ಲಿ ಹಿಂದುಳಿದಿರುವಿಕೆಯನ್ನು ಗುರುತಿಸಿ ಸೂತ್ರ ರೂಪಿಸಿತು. ಆದರೆ ರಾಜ್ಯ ಸಚಿವ ಸಂಪುಟವು ಆಯೋಗದ ಸೂತ್ರವನ್ನು ಮಾರ್ಪಡಿಸಿ ವರ್ಗೀಕರಿಸಿತು. ಆದ್ದರಿಂದ ಅಲೆಮಾರಿ
ಹಾಗೂ ಅರೆ ಅಲೆಮಾರಿ ಜಾತಿಗಳಿಗೆ ಸರ್ಕಾರದ ಈ ಕ್ರಮ “ಮರಣಶಾಸನ’ವಾಗಿ ಪರಿಣಮಿಸಿದೆ.
101 ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿರುವ ಚನ್ನದಾಸ, ಬುಡ್ಗಜಂಗಮ, ಸುಡುಗಾಡುಸಿದ್ದ, ದಕ್ಕಲರು, ಮಾಲದಾಸರು, ಹೊಲಿಯದಾಸರು, ಡಂಬರ್, ಸಿಳ್ಳೆಕ್ಯಾತರು, ಸಿಂಧೂಳು ಮುಂತಾದ 59 ಜಾತಿಗಳು ರಾಜ್ಯ ಸರ್ಕಾರದ ಅಮಾನುಷ ನಡೆಯಿಂದ ಆಘಾತಗೊಂಡು ತೀವ್ರ ಪ್ರತಿಭಟನೆ ನಡೆಸುತ್ತಿದೆ.
ಬಹಳ ಹಿಂದುಳಿದ 59 ಅಲೆಮಾರಿ ಸಣ್ಣ ಜಾತಿಗಳನ್ನು ಅತೀ ಕಡಿಮೆ ಹಿಂದುಳಿದಿರುವ ‘ಸಿ’ ವರ್ಗದ ಸ್ಪಷ್ಟ ಜಾತಿಗಳೊಟ್ಟಿಗೆ ಸೇರಿಸಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ನಿರ್ದೇಶನದ ಉಲ್ಲಂಘನೆ ಹಾಗೂ ಅಪಮಾನಿಸಿದಂತಾಗಿದೆ. ಅಲ್ಲದೆ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಮೂರು ಜಾತಿಗಳ ಗೊಂದಲವನ್ನು ಸರಿಯಾಗಿ ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. – DR N Murthy
Reported by Srikanth Shivaraj






